ಯೆಶಾಯ 24:16 - ಕನ್ನಡ ಸತ್ಯವೇದವು J.V. (BSI)16 ಸದ್ಧರ್ಮಿಗಳಿಗೆ ಮಾನವಾಗಲೆಂಬ ಗೀತಗಳು ಭೂಮಂಡಲದ ಕಟ್ಟಕಡೆಯಿಂದ ನಮಗೆ ಕೇಳಬಂದಿವೆ. ನಾನಾದರೋ - ಕ್ಷಯಿಸೇ ಕ್ಷಯಿಸುತ್ತೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ ಎಂದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.” ಅಧ್ಯಾಯವನ್ನು ನೋಡಿ |