Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:2 - ಕನ್ನಡ ಸತ್ಯವೇದವು J.V. (BSI)

2 ಪ್ರಜೆ ಯಾಜಕ, ದಾಸ ದಣಿ, ತೊತ್ತು ಯಜಮಾನಿ, ಕೊಳ್ಳುವವನು ಮಾರುವವನು, ಸಾಲಕೊಡುವವನು ತರುವವನು, ಬಡ್ಡಿ ತೆಗೆಯುವವನು ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ , ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:2
26 ತಿಳಿವುಗಳ ಹೋಲಿಕೆ  

ಜನರೂ ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು,


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನನ್ನ ಉಗ್ರರೋಷಾಗ್ನಿಯು ಯೆರೂಸಲೇವಿುನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವದು; ನೀವು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.


ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಕುಲಹೀನರು ಬೊಗ್ಗುವರು, ಕುಲೀನರು ಕುಗ್ಗುವರು, ಉನ್ನತರ ದೃಷ್ಟಿಯು ತಗ್ಗುವದು.


ಹೀಗಿರಲು ಅಧಮರಾಗಲಿ ಉತ್ತಮರಾಗಲಿ ತಗ್ಗಿಸಲ್ಪಡುವರು; (ಅವರನ್ನು ಕ್ಷವಿುಸಬೇಡ).


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲಿಗೆ ಸೆರೆಯೊಯ್ದನು. ಪಾರಸಿಯ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ಬರಗಾಲ ಬರುವದಕ್ಕಿಂತ ಮುಂಚೆ ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತೆಂಬಾಕೆಯಲ್ಲಿ ಅವನಿಗೆ ಹುಟ್ಟಿದರು.


ಭೂವಿುಯು ಬಟ್ಟಬರಿದಾಗುವದು, ಲೋಕಕ್ಕೆ ಸಂಪೂರ್ಣ ಸುಲಿಗೆಯಾಗುವದು; ಯೆಹೋವನೇ ಇದನ್ನು ನುಡಿದಿದ್ದಾನೆ.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋವಿುನ ಪಾಪಕ್ಕಿಂತಲೂ ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಯೆಹೋವನ ಉಗ್ರದೃಷ್ಟಿಯು ಅವರನ್ನು ಚದರಿಸಿದೆ; ಆತನು ಇನ್ನು ಕಟಾಕ್ಷಿಸನು. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು