Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:4
32 ತಿಳಿವುಗಳ ಹೋಲಿಕೆ  

ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರು? ನಮ್ಮ ದೇವರೇ ಅಸಮಾನವಾದ ಆಶ್ರಯದುರ್ಗವು.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಯೆಹೋವನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವದಿಲ್ಲ, ಸದಾ ಸ್ಥಿರವಾಗಿರುತ್ತದೆ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ಏಕಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ; ಹೀಗಿರಲು ನೀನು ಇಷ್ಟವಾದ ಗಿಡಗಳನ್ನು ನೆಟ್ಟು ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ಹಾಕಿದ್ದಿ;


ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು].


ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.


ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಖೋರರು ಏಳದಿರಲಿ. ಸೆಲಾ.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ನೀವೋ ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ; ಇಸ್ರಾಯೇಲ್ಯರ ಶರಣನ ಸಾನ್ನಿಧ್ಯವನ್ನು ಬಯಸಿ ಯೆಹೋವನ ಪರ್ವತಕ್ಕೆ ಪಿಳ್ಳಂಗೋವಿಯ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು