Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:9 - ಕನ್ನಡ ಸತ್ಯವೇದವು J.V. (BSI)

9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:9
28 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು ಮಧ್ಯರಾತ್ರಿಯಲ್ಲಿ ಏಳುವೆನು.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.


ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ಹೊರಟು ಅಡವಿಯ ಸ್ಥಳಕ್ಕೆ ಹೋಗಿ ದೇವರನ್ನು ಪ್ರಾರ್ಥಿಸುತ್ತಿದ್ದನು.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುವದಕ್ಕಿಂತ ವಿಶೇಷವಾಗಿ ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ ತಿರುಗಿ ಆತನ ಪ್ರಸನ್ನತೆಯನ್ನು ಆಶಿಸಿ -


ಮೃಷ್ಟಭೋಜನದಿಂದಲೋ ಎಂಬಂತೆ ನನ್ನ ಮನಸ್ಸು ಸಂತುಷ್ಟವಾಗಿರುವದು; ನನ್ನ ಬಾಯಿ ಉತ್ಸಾಹಧ್ವನಿಮಾಡುತ್ತಾ ನಿನ್ನನ್ನು ಕೊಂಡಾಡುವದು.


ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.


ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಕೈಕೊಳ್ಳುತ್ತೇನೆ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.


ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು