Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:1 - ಕನ್ನಡ ಸತ್ಯವೇದವು J.V. (BSI)

1 ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:1
30 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಅದೇನಂದರೆ ಕೆಂಪಾದ ಮಹಾ ಘಟಸರ್ಪವಿತ್ತು; ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಮಕುಟಗಳಿದ್ದವು.


ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.


ಅದರಲ್ಲಿ ಹಡಗುಗಳು ಸಂಚರಿಸುತ್ತವೆ; ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.


ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವದು.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.


ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು.


[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.


ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು; ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡಿ - ಬಾ, ಬಹಳ ನೀರುಗಳ ಮೇಲೆ ವಾಸಿಸಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಮತ್ತು ಘಟಸರ್ಪ ಮೃಗ ಸುಳ್ಳುಪ್ರವಾದಿ ಇವರ ಬಾಯಿಗಳಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವದನ್ನು ಕಂಡೆನು.


ಮತ್ತೊಂದು ಮೃಗವು ಭೂವಿುಯೊಳಗಿಂದ ಬರುವದನ್ನು ಕಂಡೆನು. ಇದಕ್ಕೆ ಟಗರಿಗಿರುವಂತೆ ಎರಡು ಕೊಂಬುಗಳಿದ್ದವು; ಘಟಸರ್ಪದಂತೆ ಮಾತಾಡಿತು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ನಮಸ್ಕಾರ ಮಾಡುವವರಾದರು. ಇದಲ್ಲದೆ ಆ ಮೃಗಕ್ಕೂ ನಮಸ್ಕಾರ ಮಾಡಿ - ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧಮಾಡುವದಕ್ಕೆ ಯಾರು ಶಕ್ತರು? ಅಂದರು.


ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಆಹಾ, ಬಹುಜಲಮಧ್ಯನಿವಾಸಿನಿಯಾದ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಣಗಿಕೋ! ಶಾಂತಿಗೊಳ್ಳು, ಸುಮ್ಮನಿರು!


ತೋಳವು ಕುರಿಯ ಸಂಗಡ ಮೇಯುವದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಹಾವಿಗೆ ದೂಳೇ ಆಹಾರವಾಗುವದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡುಮಾಡುವದಿಲ್ಲ, ಯಾರೂ ಹಾಳುಮಾಡುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ಶೂರನೇ ಮಹಿಮಪ್ರಭಾವಗಳನ್ನು ಧರಿಸಿಕೊಂಡು ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.


ಘಟಸರ್ಪವನ್ನು ಎಬ್ಬಿಸುವದರಲ್ಲಿಯೂ ದಿನಗಳನ್ನು ಶಪಿಸುವದರಲ್ಲಿಯೂ ಜಾಣರಾದ [ಮಾಂತ್ರಿಕರು] ಅದಕ್ಕೆ ಶಾಪ ಕೊಡಲಿ.


ನೀನು ಮೊಸಳೆಯನ್ನು ಗಾಳದಿಂದ ಎಳೆದು ಹುರಿಯಿಂದ ಅದರ ನಾಲಿಗೆಯನ್ನು ಅದುವಿು ಬಿಗಿಯುವಿಯೋ?


ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು