Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:4 - ಕನ್ನಡ ಸತ್ಯವೇದವು J.V. (BSI)

4 ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:4
17 ತಿಳಿವುಗಳ ಹೋಲಿಕೆ  

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ಇಸ್ರಾಯೇಲ್ಯರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವದು, ಅವರ ಸದಮಲಸ್ವಾವಿುಯು ಜ್ವಾಲೆಯಂತಿರುವನು; ಅದು ಒಂದೇ ದಿವಸದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವದು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದೀ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದೀ.


ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ; ಅವುಗಳನ್ನು ಹಿಡಿಯಬೇಕೆಂದಿರುವವನು ಕೈಯಿಂದ ಹಿಡಿಯಲಾರದೆ


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ.


ಆತನು ಯಾವಾಗಲೂ ತಪ್ಪುಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು; ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವವು.


ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು; ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟು ಹೋಗುವವು.


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು