Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನು ತನ್ನ ಪ್ರಜೆಯ ಘಾತಕರನ್ನು ಹೊಡೆದಂತೆ ಆ ತನ್ನ ಪ್ರಜೆಯನ್ನು ಹೊಡೆದನೋ? ಅವರಿಗಾದಂಥ ಸಂಹಾರವು ಆ ಪ್ರಜೆಗೆ ಆಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಕೆಯನ್ನು ಹೊಡೆದವರನ್ನು ಆತನು ಹೊಡೆದಂತೆ ಯೆಹೋವ ದೇವರು ಆಕೆಯನ್ನು ಹೊಡೆದರೋ? ಆಕೆಯನ್ನು ಕೊಂದವರು ಹತರಾದಂತೆ ಆಕೆಯು ಸಂಹಾರವಾದಳೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:7
17 ತಿಳಿವುಗಳ ಹೋಲಿಕೆ  

ನಿನ್ನ ಗಾಯವು ಗುಣಹೊಂದದು, ನಿನ್ನ ಪೆಟ್ಟು ಗಡಸು; ನಿನ್ನ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆಹಾಕುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಎಲ್ಲಿದ್ದಾರೆ?


[ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,


ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ದೇವರು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ಇಳಕೊಳ್ಳನು.


ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಎಫ್ರಾಯೀವಿುಗೆ ರಕ್ಷಣೆಯಾಗಿರುವ ಕೋಟೆಯೂ ದಮಸ್ಕವು ನಡಿಸುವ ರಾಜ್ಯಾಧಿಕಾರವೂ ಇಲ್ಲವಾಗುವವು; ಅರಾಮ್ಯರಲ್ಲಿ ಉಳಿದವರಿಗೆ ಇಸ್ರಾಯೇಲ್ಯರ ಮಹಿಮೆಯ ಗತಿಯಾಗುವದು ಎಂಬದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.


ಇಸ್ರಾಯೇಲ್ಯರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವದು, ಅವರ ಸದಮಲಸ್ವಾವಿುಯು ಜ್ವಾಲೆಯಂತಿರುವನು; ಅದು ಒಂದೇ ದಿವಸದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವದು.


ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ಭಂಗಪಡುವರು.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು.


ಅವರ ಶರಣನು ಭಯದಿಂದ ಹೋಗಿಬಿಡುವನು; ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇವಿುನಲ್ಲಿ ಒಲೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು