Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:8 - ಕನ್ನಡ ಸತ್ಯವೇದವು J.V. (BSI)

8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:8
33 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.


ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.


ನೀವು ಸದ್ಯಕ್ಕೆ ಸ್ವಲ್ಪಕಾಲ ದೇವರ ಚಿತ್ತಾನುಸಾರ ನಾನಾ ಕಷ್ಟಗಳಲ್ಲಿದ್ದು ದುಃಖಿಸುವವರಾಗಿದ್ದರೂ ಆ ಪದವಿಯನ್ನು ಆಲೋಚಿಸಿ ಹರ್ಷಿಸುವವರಾಗಿದ್ದೀರಿ.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.


ನನ್ನ ಸೇವಕ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು; ವಿುತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವದಿಲ್ಲ. ಇದು ಯೆಹೋವನ ನುಡಿ.


ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ಯೆಹೋವನು ಹೀಗನ್ನುತ್ತಾನೆ - ದೇಶವೆಲ್ಲಾ ಬಟ್ಟಬರಿದಾಗುವದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಆತನು ನಮ್ಮ ಪ್ರಕೃತಿಯನ್ನು ಬಲ್ಲನು; ನಾವು ಧೂಳಿಯಾಗಿದ್ದೇವೆಂಬದನ್ನು ನೆನಪುಮಾಡಿಕೊಳ್ಳುತ್ತಾನೆ.


ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.


ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.


ಆತನು ಯಾವಾಗಲೂ ತಪ್ಪುಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ಕರ್ತನು ಸದಾಕಾಲಕ್ಕೂ ಬಿಟ್ಟುಬಿಡುವವನಲ್ಲ;


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು