Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:8 - ಕನ್ನಡ ಸತ್ಯವೇದವು J.V. (BSI)

8 ಹಸಿದವನು ಕನಸು ಕಂಡು ಆಹಾ, ಉಣ್ಣುತ್ತೇನೆ ಎಂದು ಕೊಂಡಂತಾಗುವದು; ಎಚ್ಚತ್ತಾಗ ಅವನ ಹೊಟ್ಟೆ ಬರಿದೇ. ಬಾಯಾರಿದವನು ಸ್ವಪ್ನದಲ್ಲಿ ಇಗೋ ಕುಡಿಯುತ್ತೇನೆ ಎಂದುಕೊಂಡ ಹಾಗೂ ಆಗುವದು; ನಿದ್ರೆ ತಿಳಿದಾಗ ಬಳಲಿ ನೀರನ್ನು ಬಯಸುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲಜನಾಂಗಗಳ ಗುಂಪಿಗೆ ಈ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ರಾಷ್ಟ್ರಗಳ ಸಮುದಾಯದ ಗತಿ ಸ್ವಪ್ನಕಾಣುವವನ ಗತಿಯಾಗುವುದು. ಹಸಿದಿರುವ ಅವನು ಉಣ್ಣುವಂತೆ ಕನಸುಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಬಳಲಿ ಬಾಯಾರಿಕೆಯಿಂದಲೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದು ಕೂಡಾ ಸೈನ್ಯದವರಿಗೆ ಒಂದು ಕನಸಿನಂತಿರುವದು. ಅವರಿಗೆ ಬೇಕಾದದ್ದು ದೊರಕುವದಿಲ್ಲ. ಹಸಿವೆಯಲ್ಲಿರುವ ಒಬ್ಬನು ಆಹಾರದ ಕನಸು ಕಂಡಂತಿರುವದು. ಅವನು ಎಚ್ಚರವಾದಾಗ ಹಸಿವಿನಿಂದಲೇ ಇರುವನು. ಬಾಯಾರಿದ ಮನುಷ್ಯನು ನೀರಿಗಾಗಿ ಕಾಣುವ ಕನಸಿನಂತಿರುವುದು. ಅವನು ಎಚ್ಚರಗೊಂಡಾಗ ಬಾಯಾರಿಕೆಯು ಇನ್ನೂ ಇರುವದು. ಚೀಯೋನಿಗೆ ವಿರುದ್ಧ ಯುದ್ಧಮಾಡುವ ಆ ಜನಾಂಗಗಳ ಗತಿಯು ಅಂತೆಯೇ ಇರುವದು. ಅವರು ತಾವು ಆಶಿಸುವ ವಸ್ತುಗಳನ್ನು ಹೊಂದುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಸಿದ ಮನುಷ್ಯನು ಕನಸು ಕಂಡು ಇಗೋ, ಉಣ್ಣುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚೆತ್ತಾಗ ಪ್ರಾಣ ತುಂಬಿದ ಹಾಗೆಯೂ, ಬಾಯಾರಿದವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚರವಾದಾಗ ಬಲಹೀನನಾಗಿದ್ದು, ಪ್ರಾಣ ಆಶಿಸುವ ಹಾಗೆಯೇ ಚೀಯೋನ್ ಪರ್ವತಕ್ಕೆ ವಿರೋಧವಾಗಿ ಯುದ್ಧಮಾಡುವ ಎಲ್ಲಾ ಜನಾಂಗಗಳ ಸಮೂಹವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:8
10 ತಿಳಿವುಗಳ ಹೋಲಿಕೆ  

ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು.


ಎಚ್ಚರವಾದವನು ಕನಸನ್ನು ಹೇಗೋ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ.


ಚೀಯೋನನ್ನು ದ್ವೇಷಿಸುವವರೆಲ್ಲರು ಅವಮಾನದಿಂದ ಹಿಂದಿರುಗಲಿ.


ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು;


ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.


[ನಿನೆವೆಯೇ,] ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ಕಾಯಿ, ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು