ಯೆಶಾಯ 30:14 - ಕನ್ನಡ ಸತ್ಯವೇದವು J.V. (BSI)14 ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ, ಬಾವಿಯಿಂದ ನೀರನ್ನು ಗೋಚುವದಕ್ಕಾಗಲಿ ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದುಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದು ಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.” ಅಧ್ಯಾಯವನ್ನು ನೋಡಿ |