Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:25 - ಕನ್ನಡ ಸತ್ಯವೇದವು J.V. (BSI)

25 ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:25
22 ತಿಳಿವುಗಳ ಹೋಲಿಕೆ  

ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ನನ್ನನ್ನು ನಂಬಿದವನ ಹೊಟ್ಟೆಯೊಳಗಿಂದ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಜೀವಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.


ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವದು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ಜನಾಂಗಗಳ ವಶದಿಂದ ತಪ್ಪಿಸಿ ದೇಶದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿ ಇಸ್ರಾಯೇಲಿನ ಬೆಟ್ಟಗಳಲ್ಲಿಯೂ ತೊರೆಗಳ ಬಳಿಯಲ್ಲಿಯೂ ಸೀಮೆಯ ಎಲ್ಲಾ ಹಕ್ಕೆಗಳಲ್ಲಿಯೂ ಮೇಯಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿಕೋಮಲವಾದದ್ದನ್ನು ಚಿವುಟಿ ಉನ್ನತೋನ್ನವಾದ ಪರ್ವತದ ಮೇಲೆ ನಾಟುವೆನು;


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.


ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರತಂದನು; ಆಹಾ, ದೇವಸ್ಥಾನದ ಹೊಸ್ತಲ ಕೆಳಗಿನಿಂದ ನೀರು ಹೊರಟು ಮೂಡಲಿಗೆ ಹರಿಯುತ್ತಿತ್ತು (ದೇವಸ್ಥಾನವು ಪೂರ್ವಾಭಿಮುಖವಷ್ಟೆ); ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ಅವರ ಕಪಿಲೆಗಳಿಂದ ನೀರು ಹರಿಯುತ್ತಲೇ ಇದೆ; ಅವರ ಬಿತ್ತನೆಗೆ ಬೇಕಾದಷ್ಟು ನೀರಿದೆ. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು; ಅವರ ರಾಜ್ಯವು ಅಭಿವೃದ್ಧಿಯಲ್ಲಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು