Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:28 - ಕನ್ನಡ ಸತ್ಯವೇದವು J.V. (BSI)

28 ಆತನ ಶ್ವಾಸವು ತುಂಬಿತುಳುಕಿ ಕಂಠದ ಮಟ್ಟಿಗೂ ಏರುವ ತೊರೆ; ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವದಕ್ಕೆ ಬರುತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ಕಟಬಾಯಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆತನ ಶ್ವಾಸವು ತುಂಬುತ್ತಾ, ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:28
34 ತಿಳಿವುಗಳ ಹೋಲಿಕೆ  

ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.


ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ ಇಸ್ರಾಯೇಲ್ಯರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಅಪ್ಪಣೆಕೊಡುವೆನು; ಹೀಗಾದರೂ ಒಂದು ಕಾಳೂ ನೆಲಕ್ಕೆಬೀಳದು.


ನೀನು ನನಗೆ ವಿರೋಧವಾಗಿ ಉಬ್ಬಿಕೊಂಡಿರುವದೂ ಕುಪಿತನಾಗಿರುವದೂ ನನಗೆ ತಿಳಿದು ಬಂತು. ಆದದರಿಂದ ನಿನಗೆ ಮೂಗುದಾಣವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮ್ಮನ್ನು ಗೋದಿಯಂತೆ ಒನೆಯಬೇಕೆಂದು ಅಪ್ಪಣೆ ಕೇಳಿಕೊಂಡನು;


ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಅದೇ ಕಾರಣದಿಂದ ದೇವರು ಅಸತ್ಯನಡಿಸುವ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಆ ಸುಳ್ಳನ್ನು ನಂಬುವದಕ್ಕೆ ಅವರನ್ನು ಬಿಡುತ್ತಾನೆ.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಹೀಗಿರಲು ಅವರು ಪ್ರಾತಃಕಾಲದ ಮೋಡದ ಪ್ರಕಾರವಾಗಿಯೂ ಬೇಗನೆ ಮಾಯವಾಗುವ ಇಬ್ಬನಿಯಂತೆಯೂ ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ ಗವಾಕ್ಷದಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.


[ಆದದರಿಂದ] ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರುಕಡಿವಾಣಗಳಿಂದಲ್ಲದೆ ಸ್ವಾಧೀನವಾಗುವದಿಲ್ಲವಷ್ಟೆ.


ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ತೋರಿಬಂದವು.


ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ನೀವು ನಿಮ್ಮೊಳಗೆ - ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಅಸತ್ಯವನ್ನು ಆಶ್ರಯಿಸಿಕೊಂಡು ಮೋಸವನ್ನು ಮರೆ ಹೊಕ್ಕಿದ್ದೇವಲ್ಲಾ ಅಂದುಕೊಂಡದರಿಂದ


ನೀವೋ ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ; ಇಸ್ರಾಯೇಲ್ಯರ ಶರಣನ ಸಾನ್ನಿಧ್ಯವನ್ನು ಬಯಸಿ ಯೆಹೋವನ ಪರ್ವತಕ್ಕೆ ಪಿಳ್ಳಂಗೋವಿಯ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!


ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು