Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:7 - ಕನ್ನಡ ಸತ್ಯವೇದವು J.V. (BSI)

7 ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:7
20 ತಿಳಿವುಗಳ ಹೋಲಿಕೆ  

ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.


ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.


ಆತನು ಮೊದಲು - ಇದೇ ನಿಮಗೆ ಆವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪಶಮನವು ಇದೇ ಎಂದು ಹೇಳಿದಾಗ ಇವರು ಕೇಳಲೊಲ್ಲದೆ ಹೋದರು.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.


ಐಗುಪ್ತ ಬಾಬೆಲ್ ದೇಶಗಳವರನ್ನು ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್ ಜನಾಂಗಗಳು ಅಲ್ಲೇ ಹುಟ್ಟಿದವು ಎಂಬದೇ.


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿ.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು.


ಸಹಾಯವನ್ನೂ ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.


ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳಿಗಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು ಮುರುಕಹಲ್ಲು, ಜಾರುವ ಕಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು