Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:2 - ಕನ್ನಡ ಸತ್ಯವೇದವು J.V. (BSI)

2 ಇಗೋ, ಆತನೂ ವಿವೇಕಿ, ತನ್ನ ಮಾತುಗಳನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು; ಕೆಡುಕರ ಮನೆತನಕ್ಕೂ ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:2
37 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಆಗ ಐಗುಪ್ತದ ಸಕಲ ನಿವಾಸಿಗಳು ಇಸ್ರಾಯೇಲ್ ವಂಶದವರಿಗೆ ತಾವು ಬರೀ ದಂಟಿನ ಊರುಗೋಲಾದೆವು ಎಂದು ನಾಚಿಕೆಪಟ್ಟು ನಾನೇ ಯೆಹೋವನು ಎಂಬದಾಗಿ ದೃಢಮಾಡಿಕೊಳ್ಳುವರು.


ಆಗ ಯೆರೆಮೀಯನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂಥಾ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.


ನೀಚನು ನೀಚವಾಗಿ ಮಾತಾಡುವನು; ಅವನ ಹೃದಯವು ಕೇಡನ್ನು ಕಲ್ಪಿಸಿ ಅಲ್ಲದ್ದನ್ನು ನಡೆಯಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ ಹಸಿವೆಗೊಂಡವನ ಆಶೆಯನ್ನು ಬರಿದು ಮಾಡಿ ಬಾಯಾರಿದವನ ಪಾನವನ್ನು ತಪ್ಪಿಸುವದಷ್ಟೆ.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ಆದಕಾರಣ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆ, ಐಗುಪ್ತವನ್ನು ಮರೆಹೊಗುವದರಿಂದ ಅವಮಾನ.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.


ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲವಿಧವಾದ ಕೇಡುಗಳನ್ನೂ ಬರಮಾಡಿ ತಾನು ಕೊಟ್ಟಿರುವ ಈ ಉತ್ತಮದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.


ಯೆಹೋವನ ಮಂಜೂಷವು ಹೊರಡುವಾಗ ಮೋಶೆ - ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಹಗೆಗಾರರು ಬೆಂಗೊಟ್ಟು ಓಡಿಹೋಗಲಿ ಎಂದು ಹೇಳುವನು.


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಂಡು ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ನೀನು ಆ ರಾಜರಂತೆ ಗೋರಿಗೆ ಸೇರುವದಿಲ್ಲ; ನಿನ್ನ ಪ್ರಜೆಯನ್ನು ಕೊಂದು ನಿನ್ನ ದೇಶವನ್ನು ಹಾಳುಮಾಡಿದ್ದೀ, ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಿರುವದಲ್ಲವೆ.


ಈ ವಿವೇಕವು ಸಹ ಅತಿಶಯಾಲೋಚನಾಪರನೂ ಸುಜ್ಞಾನಶ್ರೇಷ್ಠನೂ ಆಗಿರುವ ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ ವಿವೇಕವೂ ಆತನವೇ.


ಆತನಲ್ಲಿ ಬಲವೂ ಸಾಮರ್ಥ್ಯವೂ ಉಂಟು; ತಪ್ಪಿದವನೂ ತಪ್ಪಿಸಿದವನೂ ಆತನಿಗೆ ಒಳಪಟ್ಟಿರುವರು.


ಬಿಲ್ಲುಗಾರರಲ್ಲಿ ಉಳಿದವರೂ ಕೇದಾರಿನವರ ಶೂರರೂ ವಿರಳರಾಗುವರು; ಇಸ್ರಾಯೇಲ್ಯರ ದೇವರಾದ ಯೆಹೋವನು ಇದನ್ನು ನುಡಿದಿದ್ದಾನೆ ಎಂಬದೇ.


ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು