Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:1 - ಕನ್ನಡ ಸತ್ಯವೇದವು J.V. (BSI)

1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:1
24 ತಿಳಿವುಗಳ ಹೋಲಿಕೆ  

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.


ಹಗಲಿನ ಬಿಸಿಲಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಮಂಟಪವಿರುವದು.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಇಸ್ರಾಯೇಲ್ ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.


ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು