Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:16 - ಕನ್ನಡ ಸತ್ಯವೇದವು J.V. (BSI)

16 ನ್ಯಾಯವು ಅಡವಿಯಲ್ಲಿಯೂ ನೆಲೆಗೊಳ್ಳುವದು, ಧರ್ಮವು ತೋಟದಲ್ಲಿ ಇದ್ದೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸತ್ಯಸಂಧತೆ ಕಾಡುಮೇಡೆನ್ನದೆ ಎಲ್ಲೆಡೆ ನೆಲೆಗೊಳ್ಳುವುದು. ಸರ್ವರೂ ಸತ್ಯಸಂಧರಾಗಿರುವುದರಿಂದ ಸಮಾಧಾನ ನೆಲೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:16
17 ತಿಳಿವುಗಳ ಹೋಲಿಕೆ  

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.


ಅರಣ್ಯವೂ ಅಲ್ಲಿನ ಊರುಗಳೂ ಕೇದಾರಿನವರ ಗ್ರಾಮಗಳೂ ಆರ್ಭಟಿಸಲಿ, ಸೆಲಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಕೇಕೆ ಹಾಕಲಿ.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;


ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ನನ್ನ ಪರಿಶುದ್ಧಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವದಿಲ್ಲ, ಯಾರೂ ಹಾಳು ಮಾಡುವದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವದು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು