Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:17 - ಕನ್ನಡ ಸತ್ಯವೇದವು J.V. (BSI)

17 ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:17
35 ತಿಳಿವುಗಳ ಹೋಲಿಕೆ  

ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.


ಯೆಹೋವದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರಿಗಿ ಮೂರ್ಖತನದಲ್ಲಿ ಬೀಳದಿರಲಿ.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ನ್ಯಾಯತೀರ್ಪಿನ ದಿನದಲ್ಲಿ ನಮಗಿರುವ ಧೈರ್ಯದಲ್ಲಿಯೇ ಆತನ ಪ್ರೀತಿಯು ನಮ್ಮೊಳಗೆ ಸಿದ್ಧಿಗೆ ಬಂತು. ಯಾಕಂದರೆ ಕ್ರಿಸ್ತನು ಎಂಥವನಾಗಿದ್ದಾನೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.


ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು.


ಯೆಹೋವನಿಗೆ ಭಯಪಡುವದರಿಂದ ಕೇವಲ ನಿರ್ಭಯ; ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವದು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋಚದೆ ದುಃಖಕರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ನೀತಿಯೆಂಬ ಫಲವನ್ನು ಕೊಟ್ಟು ಮನಸ್ಸಿಗೆ ಸಮಾಧಾನವನ್ನು ಉಂಟುಮಾಡುತ್ತದೆ.


ಕೃಪೆಯೂ ಸತ್ಯವೂ ಒಂದನ್ನೊಂದು ಕೂಡಿರುವವು; ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುವವು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಆತನು ಮೊದಲು - ಇದೇ ನಿಮಗೆ ಆವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪಶಮನವು ಇದೇ ಎಂದು ಹೇಳಿದಾಗ ಇವರು ಕೇಳಲೊಲ್ಲದೆ ಹೋದರು.


ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಕಳುಹಿಸಿದನು.


ನನ್ನ ಮಾತಿಗೆ ಕಿವಿಗೊಡುವವನಾದರೋ ಸ್ವಸ್ಥವಾಗಿರುತ್ತಾ ಯಾವ ಕೇಡಿಗೂ ಭಯಪಡದೆ ಸುರಕ್ಷಿತನಾಗಿರುವನು ಎಂಬದೇ.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು