ಯೆಶಾಯ 32:6 - ಕನ್ನಡ ಸತ್ಯವೇದವು J.V. (BSI)6 ನೀಚನು ನೀಚವಾಗಿ ಮಾತಾಡುವನು; ಅವನ ಹೃದಯವು ಕೇಡನ್ನು ಕಲ್ಪಿಸಿ ಅಲ್ಲದ್ದನ್ನು ನಡೆಯಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ ಹಸಿವೆಗೊಂಡವನ ಆಶೆಯನ್ನು ಬರಿದು ಮಾಡಿ ಬಾಯಾರಿದವನ ಪಾನವನ್ನು ತಪ್ಪಿಸುವದಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು. ಅಧ್ಯಾಯವನ್ನು ನೋಡಿ |