Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:13 - ಕನ್ನಡ ಸತ್ಯವೇದವು J.V. (BSI)

13 ಅಲ್ಲಿನ ಅರಮನೆಗಳಲ್ಲಿ ದಬ್ಬೆಗಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವವು; ಅದು ನರಿಗಳಿಗೆ ಹಕ್ಕೆಯಾಗಿಯೂ ಉಷ್ಟ್ರಪಕ್ಷಿಗಳಿಗೆ ಎಡೆಯಾಗಿಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:13
17 ತಿಳಿವುಗಳ ಹೋಲಿಕೆ  

ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].


ಆದರೆ ನಾನು ಯಾಕೋಬನನ್ನು ಪ್ರೀತಿಸಿ ಏಸಾವನನ್ನು ದ್ವೇಷಿಸಿ ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಕಾಡುನರಿಗಳ ಪಾಲುಮಾಡಿದೆನಷ್ಟೆ; ಇದು ಯೆಹೋವನ ನುಡಿ.


ನೀನು ನಮ್ಮನ್ನು ಪರಾಜಯಪಡಿಸಿ ನಮ್ಮ ದೇಶವನ್ನು ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಕಾರ್ಗತ್ತಲು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.


ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.


ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಊಡಿಸುವವಷ್ಟೆ; ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ, ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದುಹೋಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು