Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:4 - ಕನ್ನಡ ಸತ್ಯವೇದವು J.V. (BSI)

4 ನಕ್ಷತ್ರಸೈನ್ಯವೆಲ್ಲಾ ಕ್ಷಯಿಸುವದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವದು; ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:4
20 ತಿಳಿವುಗಳ ಹೋಲಿಕೆ  

ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಆಕಾಶದ ತಾರೆಗಳೂ ನಕ್ಷತ್ರರಾಶಿಗಳೂ ಬೆಳಗವು, ಸೂರ್ಯನು ಮೂಡುತ್ತಲೇ ಕತ್ತಲಾಗುವನು, ಚಂದ್ರನು ಪ್ರಕಾಶಿಸನು.


ಇದಕ್ಕಾಗಿ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕವೂ ತೀಕ್ಷ್ಣರೋಷವೂ ಮಸಗುತ್ತಿರುವ ದಿನದಲ್ಲಿ [ಯೆಹೋವನೆಂಬ] ನಾನು ಆಕಾಶಮಂಡಲವನ್ನು ನಡುಗಿಸಿ ಭೂಲೋಕವನ್ನು ಸ್ಥಳದಿಂದ ಕದಲಿಸುವೆನು.


ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!


ಇನ್ನೊಂದೇ ಸಾರಿ ಎಂಬೀ ಮಾತನ್ನು ಯೋಚಿಸಿದರೆ ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡಬೇಕೆಂಬದು ಸ್ಪಷ್ಟವಾಗುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.


ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ; ಆಕಾಶವು ಹೊಗೆಯಂತೆ ಚದರಿ ಹೋಗುವದು, ಭೂವಿುಯು ವಸ್ತ್ರದ ಹಾಗೆ ಜೀರ್ಣವಾಗುವದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು; ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವದು, ನನ್ನ ರಕ್ಷಣಧರ್ಮದ ಕಾರ್ಯಕ್ಕೆ ಭಂಗವೇ ಇಲ್ಲ.


ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು