Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:8 - ಕನ್ನಡ ಸತ್ಯವೇದವು J.V. (BSI)

8 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “‘ನೀವು ನನ್ನ ಒಡೆಯನಾದ ಅರಸನೊಂದಿಗೆ ಯುದ್ಧಮಾಡುವ ಆಲೋಚನೆಯನ್ನು ಇನ್ನೂ ಹೊಂದಿದ್ದರೆ, ನಿಮ್ಮೊಂದಿಗೆ ಈ ಒಪ್ಪಂದವನ್ನು ಮಾಡಿಕೊಳ್ಳುವೆನು. ಯುದ್ಧಕ್ಕೆ ಬರಲು ನಿಮ್ಮಲ್ಲಿ ಸಾಕಷ್ಟು ಸೈನಿಕರಿದ್ದಾರೆ. ನಾನು ನಿಮಗೆ ಎರಡುಸಾವಿರ ಕುದುರೆಗಳನ್ನು ಕೊಡುವುದಾಗಿ ವಾಗ್ದಾನ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಹಾಗಾದರೆ, ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:8
13 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಎಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?


ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು ಹೊಣೆಗಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.


ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ ಎಂದು ಆಜ್ಞಾಪಿಸಿದನು.


ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು.


ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬವನನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.


ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ!


ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳಿಗಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು