Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:38 - ಕನ್ನಡ ಸತ್ಯವೇದವು J.V. (BSI)

38 ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:38
13 ತಿಳಿವುಗಳ ಹೋಲಿಕೆ  

ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಸೀಮೆಯ ಬೆಟ್ಟಗಳಲ್ಲಿ ನಿಂತಿತು.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ - ನಿಮ್ಮೊಡನೆ ಕಟ್ಟುವದಕ್ಕೆ ನಮಗೂ ಅಪ್ಪಣೆಯಾಗಲಿ; ಯಾಕಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರಾಗಿದ್ದೇವೆ; ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಾರ್ಪಣೆಮಾಡುತ್ತಾ ಬಂದಿದ್ದೇವೆ ಎಂದು ಹೇಳಿದರು.


[ಹಿಜ್ಕೀಯನೇ,] ನೀನು ನಂಬುವ ದೇವರು - ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?


ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ.


ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!


ಬರುತ್ತಿರುವ ನಿನ್ನನ್ನು ಎದುರುಗೊಳ್ಳುವದಕ್ಕೆ ಕೆಳಗಡೆ ಪಾತಾಳವು ತಳಮಳಪಡುತ್ತದೆ; ನಿನಗೋಸ್ಕರ ಪ್ರೇತಗಳನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ ಜನಾಂಗಗಳ ಸಕಲ ರಾಜರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.


ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವದಕ್ಕೆ ಸಮರ್ಥನಾಗಿದ್ದನು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವದಕ್ಕೆ ಶಕ್ತನಾಗಿರುವನೋ?


ಇಗೋ, ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬೀ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ ಎಂಬದಾಗಿ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು