Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:10 - ಕನ್ನಡ ಸತ್ಯವೇದವು J.V. (BSI)

10 ಆಹಾ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು; ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:10
32 ತಿಳಿವುಗಳ ಹೋಲಿಕೆ  

ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.


ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ಚೀಯೋನ್ ನಗರಿಯೇ, ಹೆದರಬೇಡ; ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ ಎಂಬ ಶಾಸ್ತ್ರದ ಮಾತು ನೆರವೇರಿತು.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಆಶೀರ್ವಾದ ಎಂದು ಆರ್ಭಟಿಸಿದರು.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು.


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣ ಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಧ್ವನಿಯು ಗೋಳಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು