Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:4 - ಕನ್ನಡ ಸತ್ಯವೇದವು J.V. (BSI)

4 ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬೈಲುಸೀಮೆಯಾಗುವದು, ಕೊರಕಲ ನೆಲವು ಸಮವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತುಂಬಬೇಕು ಎಲ್ಲ ಹಳ್ಳಕೊಳ್ಳಗಳನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿಯೊಂದು ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು. ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು. ಒರಟಾದ ನೆಲವು ಸಮವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:4
18 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ಎತ್ತಿಹಾಕು! ಎಲ್ಲವೂ ವ್ಯತ್ಯಸ್ತವಾಗಲಿ; ಕೆಳಗಿನದನ್ನು ಮೇಲೆ ಮಾಡು, ಮೇಲಿನದನ್ನು ಕೆಳಗೆ ಮಾಡು;


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಅರಣ್ಯವೂ ಅಲ್ಲಿನ ಊರುಗಳೂ ಕೇದಾರಿನವರ ಗ್ರಾಮಗಳೂ ಆರ್ಭಟಿಸಲಿ, ಸೆಲಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಕೇಕೆ ಹಾಕಲಿ.


ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.


ಇಗೋ ಒಂದು ವಾಣಿ! - ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜ ಮಾರ್ಗವನ್ನು ನೆಟ್ಟಗೆ ಮಾಡಿರಿ;


ಯೆಹೋವನ ಮಹಿಮೆಯು ಗೋಚರವಾಗುವದು, ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ನನ್ನ ಸೃಷ್ಟಿಯ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು