Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಮಹಿಮೆಯು ಗೋಚರವಾಗುವದು, ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:5
39 ತಿಳಿವುಗಳ ಹೋಲಿಕೆ  

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವದು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ನನ್ನ ಪರಿಶುದ್ಧಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವದಿಲ್ಲ, ಯಾರೂ ಹಾಳು ಮಾಡುವದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವದು.


ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ, ಮತ್ತು ನಾನು ನಿಮ್ಮನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ನಿಮ್ಮ ಪಿತೃವಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.


ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರಿಗಿ ಕಟ್ಟಿಸಿದನೆಂದೂ


ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸೌಂದರ್ಯಗಳೂ ಇರುತ್ತವೆ.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.


ಹೊತ್ತಾರೆಯಲ್ಲಿಯೂ ಆತನ ಮಹಿಮೆಯು ನಿಮಗೆ ಕಾಣಬರುವದು. ನೀವು ಯೆಹೋವನ ಮೇಲೆ ಗುಣುಗುಟ್ಟುವ ಮಾತುಗಳು ಆತನಿಗೆ ಕೇಳಿಸಿದವು; ನಮ್ಮ ಮೇಲೆ ನೀವು ಗುಣುಗುಟ್ಟುವದೇನು? ನಾವು ಎಷ್ಟು ಮಾತ್ರದವರು ಎಂದು ಹೇಳಿದರು.


ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.


ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಯಾವದೂ ಇಲ್ಲದಿರದು, ಎಲ್ಲವೂ ಜೊತೆಜೊತೆಯಾಗಿರುವವು; ಆತನ ಬಾಯಿಂದ ಅಪ್ಪಣೆಯಾಯಿತಲ್ಲವೆ, ಆತನ ಆತ್ಮವು ಇವುಗಳನ್ನು ಒಟ್ಟಿಗೆ ಬರಮಾಡಿತಷ್ಟೆ.


ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬೈಲುಸೀಮೆಯಾಗುವದು, ಕೊರಕಲ ನೆಲವು ಸಮವಾಗುವದು.


ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.


ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ. ಇದು ಯೆಹೋವನ ಮಾತು.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು