Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವದರಿಂದ ಹುಲ್ಲು ಒಣಗಿಹೋಗುವದು, ಹೂವು ಬಾಡಿ ಹೋಗುವದು. ಜನವು ಹುಲ್ಲೇ ಹುಲ್ಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:7
15 ತಿಳಿವುಗಳ ಹೋಲಿಕೆ  

ಅದರ ಉಸಿರೇ ಇದ್ದಲನ್ನು ಹೊತ್ತಿಸುವದು, ಜ್ವಾಲೆಯು ಬಾಯಿಂದೇಳುವದು.


ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು.


ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.


ದೇವರ ಶ್ವಾಸದಿಂದ ನಾಶವಾಗುತ್ತಾರೆ, ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ನೀನು ಮನುಷ್ಯರನ್ನು ಪ್ರವಾಹದಿಂದ ಬಡುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.


ಅದು ಉದಯದಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ಗಾಳಿಬಡಿಯುತ್ತಲೇ ಅದು ಹೋಗುವದು; ಅದರ ಸ್ಥಳವು ಅದನ್ನು ತಿರುಗಿ ಕಾಣುವದಿಲ್ಲ.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು