Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:17 - ಕನ್ನಡ ಸತ್ಯವೇದವು J.V. (BSI)

17 ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:17
44 ತಿಳಿವುಗಳ ಹೋಲಿಕೆ  

ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.


ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನನ್ನ ಸ್ತೋತ್ರವನ್ನು ಪ್ರಚಾರಪಡಿಸಲಿ ಎಂದು ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ


ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವದಿಲ್ಲ; ತನ್ನ ಸ್ವಾಸ್ತ್ಯವನ್ನು ಕೈಬಿಡುವದಿಲ್ಲ.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವದನ್ನಾಗಲಿ ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವದನ್ನಾಗಲಿ ನೋಡಲಿಲ್ಲ.


ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.


ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು.


ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಆಗ ಅವನು ನನಗೆ ಹೀಗೆ ಹೇಳಿದನು - ಈ ಪ್ರವಾಹವು ಪೂರ್ವಪ್ರಾಂತ್ಯಕ್ಕೆ ಹೊರಟು ಅರಾಬಾ ಎಂಬ ತಗ್ಗಿಗೆ ಇಳಿದು ಲವಣಸಮುದ್ರದ ಕಡೆಗೆ ಹರಿಯುವದು; [ದೇವಸ್ಥಾನದಿಂದ] ಹೊರಟ ಪ್ರವಾಹವು ಲವಣ ಸಮುದ್ರಕ್ಕೆ [ಸೇರಲು] ಅದರ ನೀರು ಸಿಹಿಯಾಗುವದು.


ಆಗ ಯೆಹೋವನು ಅವನಿಗೆ - ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.


ಇಸ್ರಾಯೇಲ್ ದೇವರೇ, ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ.


ನಾನು ಬಳಲಿದವರನ್ನು ತಂಪುಗೊಳಿಸಿ ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು