Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:18 - ಕನ್ನಡ ಸತ್ಯವೇದವು J.V. (BSI)

18 ಬೋಳುಗುಡ್ಡಗಳಲ್ಲಿ ನದಿಗಳನ್ನು, ತಗ್ಗುಗಳಲ್ಲಿ ಒರತೆಗಳನ್ನು ಹೊರಡಿಸಿ ಅರಣ್ಯವನ್ನು ಕೆರೆಯಾಗಿಯೂ ಮರುಭೂವಿುಯನ್ನು ಬುಗ್ಗೆಗಳಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು ತಗ್ಗುಗಳ ಮಧ್ಯದಲ್ಲಿ ಬುಗ್ಗೆಗಳನ್ನು ಹೊರಡಿಸಿ, ಮರುಭೂಮಿಯನ್ನು ನೀರಿನ ಕೆರೆಯನ್ನಾಗಿಯೂ, ಒಣನೆಲವನ್ನು ನೀರಿನ ಒರತೆಗಳನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:18
24 ತಿಳಿವುಗಳ ಹೋಲಿಕೆ  

ಅರಣ್ಯವನ್ನು ಕೆರೆಯಾಗಿಯೂ ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.


ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ಆತನು ಬಂಡೆಯನ್ನು ಸೀಳಲು ನೀರು ಚಿವ್ಮಿು ಬಂದು ಅರಣ್ಯದಲ್ಲಿ ನದಿಯಾಗಿ ಹರಿಯಿತು.


ಒಂದು ನದಿ ಅದೆ; ಅದರ ಕಾಲುವೆಗಳು ಪರಾತ್ಪರನ ಪರಿಶುದ್ಧ ನಿವಾಸಸ್ಥಾನವಾಗಿರುವ ದೇವನಗರವನ್ನು ಸಂತೋಷಪಡಿಸುತ್ತವೆ.


ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದು ಹೋಗುತ್ತವೆ.


ಅಲ್ಲಿ ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು.


ಅರಣ್ಯವೂ ಮರುಭೂವಿುಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವದು.


ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಆತನು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಕುಡಿದು ಪುನಃ ಚೈತನ್ಯ ಹೊಂದಿದನು. ಆದದರಿಂದ ಅದಕ್ಕೆ ಏನ್‍ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿರುತ್ತದೆ.


ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರಿಗಿ ಬರಮಾಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು