Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:29 - ಕನ್ನಡ ಸತ್ಯವೇದವು J.V. (BSI)

29 ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:29
16 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೇ ಹೀಗಾಗಲಿ ಅಂದುಕೊಂಡಿದ್ದಾರೆ.


ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮರೆಹೊಗುವವರು ತುಚ್ಫರೇ ಸರಿ!


ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ?


ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ಇವರ ದೇಶವು ವಿಗ್ರಹಗಳಿಂದಲೂ ತುಂಬಿದೆ, ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.


ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೇ ಕಣ್ಣಿಡುವರು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.


ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.


ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು