Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:10 - ಕನ್ನಡ ಸತ್ಯವೇದವು J.V. (BSI)

10 ಸಮುದ್ರಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:10
32 ತಿಳಿವುಗಳ ಹೋಲಿಕೆ  

ಆತನ ಘನಕ್ಕಾಗಿ ನೂತನಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಆತ್ಮಕ್ಲೇಶದಿಂದ ಗೋಳಾಡುವಿರಿ.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಶ್ವಾಸವಿರುವದೆಲ್ಲವೂ ಯೆಹೋವನನ್ನು ಸ್ತುತಿಸಲಿ; ಯಾಹುವಿಗೆ ಸ್ತೋತ್ರ!


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.


ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.


ಭೂನಿವಾಸಿಗಳಿಗೆ ನ್ಯಾಯತೀರಿಸುವದಕ್ಕೆ ಬರುವ ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.


ಆಗ ಮೋಶೆಯೂ ಇಸ್ರಾಯೇಲ್ಯರೂ ಯೆಹೋವನ ಸ್ತೋತ್ರಕ್ಕಾಗಿ ಈ ಕೀರ್ತನೆಯನ್ನು ಹಾಡಿದರು - ಯೆಹೋವನ ಸ್ತೋತ್ರವನ್ನು ಗಾನ ಮಾಡೋಣ; ಆತನು ಮಹಾ ಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿನಾಶ ಮಾಡಿದ್ದಾನೆ.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.


ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.


ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು