Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:23 - ಕನ್ನಡ ಸತ್ಯವೇದವು J.V. (BSI)

23 ನೀನು ನನಗೆ ಹೋಮಕ್ಕಾಗಿ ಕುರಿಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ, ನೈವೇದ್ಯಕ್ಕಾಗಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನ ಕುರಿಗಳನ್ನು ನನ್ನ ಬಳಿಗೆ ಯಜ್ಞಮಾಡುವದಕ್ಕಾಗಿ ತರಲಿಲ್ಲ. ನೀನು ನನ್ನನ್ನು ಸನ್ಮಾನಿಸಲಿಲ್ಲ. ನೀನು ನನಗೆ ಬಲಿಯರ್ಪಣೆ ಮಾಡಲಿಲ್ಲ. ನೀನು ಬಲಿಯರ್ಪಣೆ ಮಾಡಬೇಕೆಂದು ನಾನು ನಿನ್ನನ್ನು ಬಲವಂತಪಡಿಸಲಿಲ್ಲ. ನೀನು ಆಯಾಸಗೊಳ್ಳುವ ತನಕ ಧೂಪಹಾಕಬೇಕೆಂದು ನಾನು ನಿನ್ನನ್ನು ಒತ್ತಾಯಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:23
19 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸುತ್ತಿದ್ದಿರೋ?


ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು. ಯಾಕಂದರೆ ನನ್ನ ನೊಗವು ಮೃದುವಾದದ್ದು; ನನ್ನ ಹೊರೆಯು ಹೌರವಾದದ್ದು ಅಂದನು.


ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನೂ ಕೊಡಲಿಲ್ಲ;


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು


ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ - ನೀನು ಹಾಲು ಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಪರಿಮಳದ್ರವ್ಯಗಳನ್ನೂ ಸ್ವಚ್ಫವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು


ಒಂದೊಂದು ರಾಶಿಯ ಮೇಲೆ ಸ್ವಚ್ಫವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಲ್ಪಡಬೇಕು.


ನಿನ್ನ ಆದಾಯದಿಂದಲೂ ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು [ಸಾಧಾರಣ] ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.


ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು, ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿ ಹೇಳು.


ಇದಲ್ಲದೆ ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡಿಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಭೂಸ್ವಾಸ್ತ್ಯಗಳಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು