Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:19 - ಕನ್ನಡ ಸತ್ಯವೇದವು J.V. (BSI)

19 ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು, ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸ ಸುಟ್ಟು ತಿಂದೆನಲ್ಲಾ; ವಿುಕ್ಕದ್ದನ್ನು ನಾನು ಬೊಂಬೆ ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ, ಅಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:19
16 ತಿಳಿವುಗಳ ಹೋಲಿಕೆ  

ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಅವನು ಯೆರೂಸಲೇವಿುನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿ


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮಂದಟ್ಟುಮಾಡಿಕೊಳ್ಳುವದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಆ ಪುರುಷನು ನನಗೆ - ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವದನ್ನು ನೀನು ನೋಡಬೇಕೆಂದೇ ಇಲ್ಲಿಗೆ ತರಲ್ಪಟ್ಟಿ; ನೀನು ನೋಡುವದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು ಎಂದು ಹೇಳಿದನು.


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವದು ಖಂಡಿತ; ಘನವಂತರು ಹಸಿಯುವರು, ಸಾಮಾನ್ಯರು ಬಾಯಾರುವರು.


ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಫರೋಹನು ಆ ಮಹತ್ಕಾರ್ಯವನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!


ಕಲ್ಲುಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು