Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:23 - ಕನ್ನಡ ಸತ್ಯವೇದವು J.V. (BSI)

23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:23
40 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳೂ ಸಮುದ್ರಗಳೂ ಜಲಚರಗಳೂ ಆತನನ್ನು ಕೊಂಡಾಡಲಿ.


ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶನವನ್ನು ನೋಡಿ ಹರ್ಷಧ್ವನಿಗೈಯುವವು; ಏಕಂದರೆ ಹಾಳುಮಾಡುವವರು ಬಡಗಲಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.


ಆತನು ನನಗೆ - ನೀನು ನನ್ನ ಸೇವಕನೂ ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂವಿುಯೇ, ಸಮುದ್ರವೇ, ನಿಮ್ಮ ದುರ್ಗತಿಯನ್ನು ಏನು ಹೇಳಲಿ; ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾ ರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದುಬಂದಿದ್ದಾನೆ ಎಂಬದಾಗಿ ಹೇಳಿತು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವವು; ಅವರ ಬರುವಿಕೆಯು ಸಮೀಪವಾಯಿತು.


ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ - ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.


ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿವಿುಂಗಿಲಗಳೂ ಆದಿಸಾಗರಗಳೂ


ಹೌದು, ದೇಶದ ಸಕಲಪ್ರಜೆಗಳು ಅವರನ್ನು ಹೂಳಿಬಿಡುವರು; ಹೀಗೆ ನಾನು ಪ್ರಖ್ಯಾತಿಗೊಳ್ಳುವಾಗ ನನ್ನ ಜನರಿಗೆ ಹೆಸರುವಾಸಿಯಾಗುವದು; ಇದು ಕರ್ತನಾದ ಯೆಹೋವನ ನುಡಿ.


(ಏರಿಹೋದನೆಂದು ಹೇಳಿದ್ದರಲ್ಲಿ ಭೂವಿುಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ.


ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದೆದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.


ಬೆಟ್ಟಗಳೂ ಎಲ್ಲಾ ಗುಡ್ಡಗಳೂ ಹಣ್ಣಿನ ಮರಗಳೂ ಎಲ್ಲಾ ತುರಾಯಿ ಗಿಡಗಳೂ


ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.


ಯೆರೂಸಲೇವಿುನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ, ಅವರಿಗಿಂತ ಬಲಿಷ್ಟರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳುಮಾಡಿ ಲೋಕವನ್ನೆಲ್ಲಾ ಸಂತೋಷಪಡಿಸುವೆನು.


ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲ್ಯರನ್ನು ಬಿಡಿಸಿ ಅವರಿಗೆ ಇಷ್ಟೆಲ್ಲಾ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷಿಸಿ -


ಭೂನಿವಾಸಿಗಳಿಗೆ ನ್ಯಾಯತೀರಿಸುವದಕ್ಕೆ ಬರುವ ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.


ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ.


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು.


ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು