Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:9 - ಕನ್ನಡ ಸತ್ಯವೇದವು J.V. (BSI)

9 ವಿಗ್ರಹ ಕೆತ್ತುವವರೆಲ್ಲಾ ಮಟ್ಟಮಾಯವೇ; ಅವರ ಇಷ್ಟದ ಬೊಂಬೆಗಳು ಯಾತಕ್ಕೂ ಬಾರವು; ಬೊಂಬೆಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ; ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:9
43 ತಿಳಿವುಗಳ ಹೋಲಿಕೆ  

ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮರೆಹೊಗುವವರು ತುಚ್ಫರೇ ಸರಿ!


ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ!


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪಿತೃಗಳಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯವಸ್ತುಗಳಿಂದಲೂ ಸೇವಿಸುವನು.


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.


ಕಣ್ಣಿದ್ದರೂ ಕುರುಡಾದ ಕಿವಿಯಿದ್ದರೂ ಕಿವುಡಾದ ಜನವನ್ನು ಕರೆ.


ಕಿವುಡರೇ, ಕೇಳಿರಿ! ಕುರುಡರೇ, ನಿಮ್ಮ ಕಣ್ಣಿಟ್ಟು ನೋಡಿರಿ!


ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು.


ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು ನೀವೇ ನಮ್ಮ ದೇವರುಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು [ಇವರ ಮಾತನ್ನು] ಕೇಳಿ ನಿಜವೆಂದು ಹೇಳಲಿ.


ವಿಗ್ರಹಶರಣರೆಲ್ಲಾ ಆಶಾಭಂಗಪಡುವರು; ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ; ಅವರೆಲ್ಲರು ಕೂಡಿ ನಿಲ್ಲಲಿ, ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.


ಮೂರ್ತಿಗಳನ್ನುಂಟುಮಾಡುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು, ಹೌದು, ಒಟ್ಟಿಗೆ ಅವಮಾನದಲ್ಲಿ ಮುಣುಗುವರು.


ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ಅವರ ವಿಗ್ರಹಗಳೋ ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ನಾನು ನಿನ್ನ ಧರ್ಮವನ್ನು ಬೈಲಿಗೆ ತರುವೆನು, ನಿನ್ನ ಕಾರ್ಯಗಳೇನೋ ನಿನಗೆ ನಿಷ್ಪ್ರಯೋಜನ.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು