Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:1
31 ತಿಳಿವುಗಳ ಹೋಲಿಕೆ  

ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು


ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು


ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ ಎಂದು ನಿನಗೆ ಹೇಳುವ ನಿನ್ನ ದೇವರಾದ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಯೆಹೋವನು ಇಂತೆನ್ನುತ್ತಾನೆ - ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!


ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -


ನದೀದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯು ಕರಗಿಹೋಗುತ್ತದೆ.


ಆಹಾ, ಇನ್ನೊಂದು ಮೃಗ, ಎರಡನೇದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು, ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬಹು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.


ನಾನು ಆರಿಸಿಕೊಂಡವರಿಗೆ ಅಪ್ಪಣೆಮಾಡಿದ್ದೇನೆ. ಹೌದು, ಉತ್ಸಾಹದಿಂದ ಮೆರೆಯುವ ಆ ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರನ್ನು ಕರೆದಿದ್ದೇನೆ.


ಪ್ರಭುಗಳಿಗೆ ಅವಮಾನವನ್ನುಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಲಿಸುವನು.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೆ ಕೊಡಬಲ್ಲೆನು; ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.


ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ


ಆಗ ಯೆಹೋವನು ಅವನಿಗೆ - ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು;


ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು; ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದು, ಆ ದೊಡ್ಡದು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.


ಒಂದು ಜನಾಂಗವು ಬಡಗಲಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ನಾನು ಬಡಗಲಿಂದ ಒಬ್ಬನನ್ನು ಎಬ್ಬಿಸಿ ಕರತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿಂದ ಬಂದಿದ್ದಾನೆ; ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಮೇಲೆ ಬಿದ್ದು ಕುಂಬಾರನು ಜೇಡಿಯನ್ನು ತುಳಿಯುವ ಹಾಗೆ ತುಳಿಯುವನು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


[ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.


ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ; ಅವನ ಮಾರ್ಗವು ಸಾರ್ಥಕವಾಗುವದು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸಿಸುವನು.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಅಬಲರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿಯಿಕ್ಕಿದೆ, ಅದರ ಅಗುಳಿಗಳು ಮುರಿದುಹೋಗಿವೆ;


ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.


ಅವನು ಸೈನ್ಯಸಮೇತನಾಗಿ ನನಗೋಸ್ಕರ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ಆಹಾ, ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು