Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:17 - ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:17
37 ತಿಳಿವುಗಳ ಹೋಲಿಕೆ  

ಆತನ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದಿಲ್ಲವೆಂದು ಶಾಸ್ತ್ರವು ಹೇಳುತ್ತದೆಯಷ್ಟೆ.


ವೃಥಾದ್ರೋಹಿಗಳಿಗೆ ಆಶಾಭಂಗವಾಗಬೇಕೇ ಹೊರತು ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆಯಲ್ಪಟ್ಟದ್ದು, ಮಾನ್ಯವಾದದ್ದು; ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ ಎಂದು ಶಾಸ್ತ್ರದಲ್ಲಿ ಬರೆದದೆ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಇಗೋ, ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದಿಲ್ಲವೆಂತಲೂ ಶಾಸ್ತ್ರದಲ್ಲಿ ಬರೆದದೆಯಲ್ಲಾ. ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು.


ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.


ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ಯೇಸು ದೇವರ ಮಗನಾಗಿದ್ದಾನೆಂದು ಯಾವನು ಒಪ್ಪಿಕೊಂಡು ಹೇಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗೊಳ್ಳನು; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


ಆಮೇಲೆ ಇಸ್ರಾಯೇಲ್ ಜನವೆಲ್ಲಾ ರಕ್ಷಣೆಹೊಂದುವದು. ಇದಕ್ಕೆ ಆಧಾರವಾಗಿ ಶಾಸ್ತ್ರದಲ್ಲಿ - ಬಿಡಿಸುವವನು ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ - ಯಾಕೋಬ್ಯರು ಇನ್ನು ನಾಚಿಕೆಗೆ ಈಡಾಗರು, ಅವರ ಮುಖವು ಇನ್ನು ಬಾಡದು,


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ; ಆಕಾಶವು ಹೊಗೆಯಂತೆ ಚದರಿ ಹೋಗುವದು, ಭೂವಿುಯು ವಸ್ತ್ರದ ಹಾಗೆ ಜೀರ್ಣವಾಗುವದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು; ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವದು, ನನ್ನ ರಕ್ಷಣಧರ್ಮದ ಕಾರ್ಯಕ್ಕೆ ಭಂಗವೇ ಇಲ್ಲ.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇವಿುನವರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವದು.


ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು