Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:25 - ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:25
36 ತಿಳಿವುಗಳ ಹೋಲಿಕೆ  

ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂಬ ವೇದೋಕ್ತಿ ನೆರವೇರುವದಕ್ಕೆ ಇದರಿಂದ ಮಾರ್ಗವಾಯಿತು.


ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.


ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಹೊಂದಲಾಗದ ಎಲ್ಲಾ ಪಾಪಗಳಿಂದ ನಂಬುವವರೆಲ್ಲರು ಆತನ ಮೂಲಕವಾಗಿ ಬಿಡುಗಡೆ ಹೊಂದಿ ನೀತಿವಂತರೆನಿಸಿಕೊಳ್ಳುತ್ತಾರೆ.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳ ಹೃದಯರೆಲ್ಲರೂ ಹಿಗ್ಗುವರು.


ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ.


ಆತನ ಅದ್ಭುತಕೃತ್ಯ ಮಹತ್ಕಾರ್ಯ ನ್ಯಾಯನಿರ್ಣಯಗಳನ್ನು ನೆನಪುಮಾಡಿಕೊಳ್ಳಿರಿ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಅವನು ಅಪರಾಧಿಯೆಂದೂ ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ ಸುಂದರ ಮುಕುಟವೂ ಆಗಿರುವನು;


ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗೊಳ್ಳನು; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇವಿುನವರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು