Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:8 - ಕನ್ನಡ ಸತ್ಯವೇದವು J.V. (BSI)

8 ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ವರ್ಷಿಸು, ಗಗನವು ಸುರಿಸಲಿ; ಭೂವಿುಯು ಒಡೆದು ರಕ್ಷಣೆಯನ್ನು ಮೊಳೆಯಿಸಿ ಅದರೊಡನೆ ನೀತಿಫಲವನ್ನು ಬೆಳೆಯಿಸಲಿ, ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ. ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ. ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:8
29 ತಿಳಿವುಗಳ ಹೋಲಿಕೆ  

ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ಹುಲ್ಲು ಕೊಯಿದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ ಭೂವಿುಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ಗುಡ್ಡದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.


ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂವಿುಯು ಕಂಪಿಸಿತು; ಮೇಘಮಂಡಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿಬೆಟ್ಟವು ಕದಲಿತು.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;


ಕೇಳು, ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?


ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು