Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:3 - ಕನ್ನಡ ಸತ್ಯವೇದವು J.V. (BSI)

3 ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:3
24 ತಿಳಿವುಗಳ ಹೋಲಿಕೆ  

ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ನಾನು ಹುಟ್ಟಿದಂದಿನಿಂದ ನಿನ್ನನ್ನೇ ಆತುಕೊಂಡಿದ್ದೇನೆ; ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವದು ನಿನ್ನಲ್ಲಿಯೇ.


ಸದ್ಧರ್ಮನಿರತರಾದ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರಿ, ಯಾವ ಗುಂಡಿಯಿಂದ ತೋಡಲ್ಪಟ್ಟಿರಿ ಎಂಬದನ್ನು ನೋಡಿರಿ.


ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಏನಂದರೆ - ನಾನು ಐಗುಪ್ತ್ಯರಿಗೆ ಏನು ಮಾಡಿದೆನೋ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ನನ್ನ ಸ್ಥಳಕ್ಕೆ ಹೇಗೆ ಸೇರಿಸಿದೆನೋ ಇದನ್ನೆಲ್ಲಾ ನೀವು ನೋಡಿದ್ದೀರಷ್ಟೆ.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ; ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


[ಯೆಹೋವನೇ,] ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.


ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.


ಜನಶೇಷವು, ಅಂದರೆ ಯಾಕೋಬ್ಯರಲ್ಲಿ ಉಳಿದದ್ದು, ಪರಾಕ್ರವಿುಯಾದ ದೇವರ ಕಡೆಗೆ ತಿರುಗಿಕೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು