Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:11 - ಕನ್ನಡ ಸತ್ಯವೇದವು J.V. (BSI)

11 ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನೀನು ತಪ್ಪಿಸಲರಿಯದ ನಾಶನವು ನಿನಗೇ ತಟ್ಟನೆ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:11
28 ತಿಳಿವುಗಳ ಹೋಲಿಕೆ  

ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ಅತ್ತ ನಮ್ಮ ವಿರೋಧಿಗಳು - ಅವರಿಗೆ ತಿಳಿಯದೆಯೂ ಗೋಚರವಾಗದೆಯೂ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ ಅಂದುಕೊಳ್ಳುತ್ತಿದ್ದರು.


ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಪೀಡಿಸುವವರ ಕೈಗೆ ಒಪ್ಪಿಸಿದನು.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.


ಅವನಿಗೆ ನಾಶನವು ಅಕಸ್ಮಾತ್ತಾಗಿ ಬರಲಿ; ತಾನು ಒಡ್ಡಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನೇ ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.


ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವದು; ಮಂಗಳವು ಸಜ್ಜನರಿಗೆ ಪ್ರತಿಫಲವಾಗುವದು.


ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.


ಗುಂಪುಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮ ದೂಳಿಯಂತೆಯೂ ತಂಡೋಪತಂಡವಾಗಿ ಬಂದಿರುವ ಭಯಂಕರರು ಹಾರಿಹೋಗುವ ಹೊಟ್ಟಿನ ಹಾಗೂ ಆಗುವರು; ತಟ್ಟನೆ ಕ್ಷಣದಲ್ಲಿ ಲಯಹೊಂದುವರು.


ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು.


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ, ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದುಹೋಗನು.


ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು