Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:1
48 ತಿಳಿವುಗಳ ಹೋಲಿಕೆ  

ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಇಸ್ರಾಯೇಲ್‍ಸಂಭವರೇ, ಸಮ್ಮೇಳವಾಗಿ ದೇವನಾದ ಕರ್ತನನ್ನು ಕೊಂಡಾಡಿರಿ ಎಂದು ಹಾಡುತ್ತಾರೆ.


ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ].


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.


ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು


ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ, ವಾಗ್ದಾನಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬದು.


ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;


ನೀನು ಯೆಹೂದ್ಯನೆನಿಸಿಕೊಂಡವನೂ ಧರ್ಮಶಾಸ್ತ್ರದಲ್ಲಿ ಭರವಸವಿಟ್ಟವನೂ ದೇವರ ವಿಷಯವಾಗಿ ಹೊಗಳಿಕೊಳ್ಳುವವನೂ


ದೇವರು ಆತ್ಮಸ್ವರೂಪನು; ಆತನನ್ನು ಆರಾಧಿಸುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ಆರಾಧಿಸಬೇಕು ಅಂದನು.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ


ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;


ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


[ಅನ್ಯಜನರಲ್ಲಿ] ಒಬ್ಬನು - ನಾನು ಯೆಹೋವನ ಭಕ್ತನು ಎಂದು ಹೇಳಿಕೊಳ್ಳುವನು; ಇನ್ನೊಬ್ಬನು ಯಾಕೋಬ್ಯನು ಎನಿಸಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಯೆಹೋವದಾಸನು ಎಂದು ಬರೆದುಕೊಂಡು ಇಸ್ರಾಯೇಲ್ಯನೆಂಬ ಬಿರುದನ್ನು ಧರಿಸಿಕೊಳ್ಳುವನು.


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.


ನಿನ್ನ ಒರತೆಗಳು ಬೈಲಿನಲ್ಲಿಯೂ ನಿನ್ನ ಕಾಲುವೆಗಳು ಚೌಕದಲ್ಲಿಯೂ ಹರಡಿ ಹರಿಯುವದು ವಿಹಿತವೇ?


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ; ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಧರ್ಮಶಾಸ್ತ್ರಗಳನ್ನು ಅನುಸರಿಸುವದಿಲ್ಲ.


ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್‍ಸಂಭವರು ಸುರಕ್ಷಿತರಾದರು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.


ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ - ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.


ಅವರ ಕಪಿಲೆಗಳಿಂದ ನೀರು ಹರಿಯುತ್ತಲೇ ಇದೆ; ಅವರ ಬಿತ್ತನೆಗೆ ಬೇಕಾದಷ್ಟು ನೀರಿದೆ. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು; ಅವರ ರಾಜ್ಯವು ಅಭಿವೃದ್ಧಿಯಲ್ಲಿರುವದು.


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಾಗಿ ಕೈಕೊಳ್ಳಬೇಕು. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಲೂ ಕೂಡದು; ಉಚ್ಚರಿಸಲೂ ಕೂಡದು.


ದೇವರು ಅವನಿಗೆ - ನಿನ್ನ ಹೆಸರು ಯಾಕೋಬನಲ್ಲವೇ; ಇನ್ನು ಮೇಲೆ ನೀನು ಯಾಕೋಬನೆನಿಸಿಕೊಳ್ಳದೆ ಇಸ್ರಾಯೇಲನೆನಿಸಿಕೊಳ್ಳಬೇಕು ಎಂದು ಹೇಳಿ ಅವನಿಗೆ ಇಸ್ರಾಯೇಲ ಎಂದು ಹೆಸರಿಟ್ಟನು.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ಆಗ ಅವನು ನನಗೆ - ಇದು ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪ; ಇದಕ್ಕೆ ತಕ್ಕಂತೆ ಪ್ರತಿಯೊಬ್ಬ ಕಳ್ಳನು ದೇಶದಿಂದ ತೊಡೆಯಲ್ಪಡುವನು; ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳುಸಾಕ್ಷಿಯೂ ದೇಶದಿಂದ ತೊಡೆಯಲ್ಪಡುವನು.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.


ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನೆಂಬ ಸಣ್ಣ ಗೋತ್ರದವರೂ ಗುಂಪಾಗಿ ಬರುವ ಯೆಹೂದಕುಲ ಪ್ರಭುಗಳೂ ಜೆಬುಲೂನ ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.


ಸದ್ಧರ್ಮನಿರತರಾದ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರಿ, ಯಾವ ಗುಂಡಿಯಿಂದ ತೋಡಲ್ಪಟ್ಟಿರಿ ಎಂಬದನ್ನು ನೋಡಿರಿ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ಯಾಕೋಬ್ ವಂಶವೇ, ಯೆಹೋವನ ಸ್ವಭಾವವು ಹಿಡಿತವಾದದ್ದೋ, ಇಂಥ ಕೃತ್ಯಗಳು ಆತನವೋ ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೇ ಹಿತಕರವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು