Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:16 - ಕನ್ನಡ ಸತ್ಯವೇದವು J.V. (BSI)

16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, [ಭೂವಿುಯು] ಉಂಟಾದಂದಿನಿಂದ ಅಲ್ಲಿ ಇದ್ದೇನೆ. (ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ. “ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.” ಈಗ ಸಾರ್ವಭೌಮ ಯೆಹೋವ ದೇವರು ತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:16
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ; ಜನಾಂಗಗಳು [ಎಷ್ಟಾದರೂ] ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತಾಡಲಿ; ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗುವ.


ಜನಾಂಗಗಳೇ, ಸಮೀಪಿಸಿ ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂವಿುಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವದೆಲ್ಲವೂ ಆಲಿಸಲಿ.


ಹೌದು, ಇಂದಿನಿಂದ ನಾನೇ ಪರಮಾತ್ಮನು; ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಯಾರು ಅಡ್ಡಬಂದಾರು? ಎಂಬದೇ ಯೆಹೋವನ ಮಾತು.


ಮಾಟಗಾತಿಯ ಮಕ್ಕಳೇ, ಸೂಳೆಗಾರನ ಮತ್ತು ಸೂಳೆಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! ಯಾರನ್ನು ಅಣಕಿಸಿ ವಿನೋದ ಪಡುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು