Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:7 - ಕನ್ನಡ ಸತ್ಯವೇದವು J.V. (BSI)

7 ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:7
41 ತಿಳಿವುಗಳ ಹೋಲಿಕೆ  

ಆಗ ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಏಟುಹಾಕಿ -


ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.


ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.


ಆದರೆ ಅವರು ದೊಡ್ಡ ಕೂಗಾಟ ಮಾಡುತ್ತಾ - ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು; ಅವರ ಕೂಗಾಟವು ಗೆದ್ದಿತು.


ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಕಟ್ಟುವರು, ಅವರ ಅರಸರು ನಿನ್ನನ್ನು ಸೇವಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದುಬಿಟ್ಟು ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ಜನಾಂಗಗಳು ನಿನ್ನ ಬೆಳಕಿಗೆ ನೆರೆಯುವವು, ಅರಸರು ನಿನ್ನಲ್ಲಿನ ಉದಯಪ್ರಕಾಶಕ್ಕೆ ಬರುವರು.


ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.


ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ; ಆಹಾ, ಮೊದಲೇ ನಾನು ತಿಳಿದುಕೊಂಡಿದ್ದೆನು ಎಂದು ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮುಂಚೆ ನಾನು ನಿನಗೆ ಕೇಳಗೊಡಿಸಲಿಲ್ಲ.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಮಹಾಯಾಜಕರೂ ಓಲೇಕಾರರೂ ಆತನನ್ನು ಕಾಣುತ್ತಲೇ - ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು ಅವರಿಗೆ - ಬೇಕಾದರೆ ನೀವೇ ಅವನನ್ನು ತಕ್ಕೊಂಡುಹೋಗಿ ಶಿಲುಬೆಗೆ ಹಾಕಿಸಿರಿ; ನನಗೆ ಅವನಲ್ಲಿ ಅಪರಾಧವು ಕಾಣಿಸಲಿಲ್ಲವೆಂದು ಹೇಳಿದನು.


ಅದಕ್ಕೆ ಅವರು - ಇವನನ್ನು ಬೇಡ, ಬರಬ್ಬನನ್ನು ಬಿಟ್ಟುಕೊಡಬೇಕು ಎಂದು ತಿರಿಗಿ ಕೂಗಿ ಹೇಳಿದರು. ಈ ಬರಬ್ಬನು ಕಳ್ಳನಾಗಿದ್ದನು.


ಆದರೆ ಅವರು - ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು ಎಂದು ಒಟ್ಟಾಗಿ ಕೂಗಿದರು.


ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.


ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.


ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.


ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ


ಜನಾಂಗಗಳಲ್ಲಿ ಶ್ರೇಷ್ಠರಾದವರು ಅಬ್ರಹಾಮನ ದೇವರ ಪ್ರಜೆಯಾಗಿರುವದಕ್ಕೆ ಕೂಡಿಬರುತ್ತಾರೆ; ಯಾಕಂದರೆ ಭೂಪಾಲಕರೆಲ್ಲಾ ದೇವರಿಗೇ ಅಧೀನರಾಗಿದ್ದಾರೆ. ಆತನೇ ಸರ್ವೋನ್ನತನು.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು.


ಆ ದಿನದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ರಾಜಮಾರ್ಗವಿರುವದು; ಅಶ್ಶೂರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರಕ್ಕೂ ಹೋಗಿಬರುತ್ತಿರುವರು; ಐಗುಪ್ತ್ಯರು ಅಶ್ಶೂರ್ಯರೊಂದಿಗೆ [ಯೆಹೋವನನ್ನು] ಸೇವಿಸುವರು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು