Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:14 - ಕನ್ನಡ ಸತ್ಯವೇದವು J.V. (BSI)

14 ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:14
26 ತಿಳಿವುಗಳ ಹೋಲಿಕೆ  

ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ಯಾವವಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂವಿು, ಸಾಕಾಯಿತೆಂದು ಹೇಳದ ಬೆಂಕಿ, ಇವೇ.


ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ.


ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.


ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಬರುತ್ತಿರುವ ನಿನ್ನನ್ನು ಎದುರುಗೊಳ್ಳುವದಕ್ಕೆ ಕೆಳಗಡೆ ಪಾತಾಳವು ತಳಮಳಪಡುತ್ತದೆ; ನಿನಗೋಸ್ಕರ ಪ್ರೇತಗಳನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ ಜನಾಂಗಗಳ ಸಕಲ ರಾಜರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.


ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.


ನನ್ನ ಹೃದಯವು ಭ್ರಮೆಗೊಂಡಿದೆ, ನಡುಕವು ನನ್ನನ್ನು ಆಕ್ರವಿುಸಿದೆ, ನಾನು ಅಪೇಕ್ಷಿಸುತ್ತಿದ್ದ ಸಂಜೆಹೊತ್ತೇ ನನಗೆ ಭಯಂಕರವಾಗಿ ಪರಿಣವಿುಸಿದೆ.


ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ ನಾವೂ ಇವರನ್ನು ಜೀವದೊಡನೆ ನುಂಗಿಬಿಡುವ.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ನಿನ್ನ ವೈಭವವೂ ವೀಣಾನಾದವೂ ಪಾತಾಳಕ್ಕೆ ತಳ್ಳಲ್ಪಟ್ಟಿವೆ; ನಿನಗೆ ಹುಳಗಳೇ ಹಾಸಿಗೆ, ಕ್ರಿವಿುಗಳೇ ಹೊದಿಕೆ.


ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು