Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:2 - ಕನ್ನಡ ಸತ್ಯವೇದವು J.V. (BSI)

2 ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು. ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡತೊಡಗಿದನು. ಆದರೆ ಅದು ಹೊಲಸು ಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:2
31 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೆ ಇರುವದುಂಟೋ? ಪಶುಗಳನ್ನು ಸಾಕಿದವನು ಅವುಗಳ ಹೈನಿನಿಂದ ಜೀವಿಸದೆ ಇರುವದುಂಟೋ?


ಮತ್ತು ಎಲೆಬಿಟ್ಟಿದ್ದ ಒಂದು ಅಂಜೂರದ ಮರವನ್ನು ದೂರದಲ್ಲಿ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಅದು ಅಂಜೂರದ ಹಣ್ಣಿನ ಕಾಲವಲ್ಲ.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಫಲಕಾಲ ಬಂದಾಗ ದ್ರಾಕ್ಷೆಯ ತೋಟದ ಹಣ್ಣಿನ ಪಾಲನ್ನು ಆ ಒಕ್ಕಲಿಗರಿಂದ ತೆಗೆದುಕೊಂಡು ಬರುವದಕ್ಕಾಗಿ ಒಬ್ಬ ಆಳನ್ನು ಅವರ ಬಳಿಗೆ ಕಳುಹಿಸಿದನು.


ಫಲಕಾಲ ಹತ್ತರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವದಕ್ಕಾಗಿ ಆ ಒಕ್ಕಲಿಗರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು


ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಹಿಂಡಿಗೆ ರಕ್ಷಕವಾದ ಹೂಡೆಯೇ, ಚೀಯೋನ್ ಯುವತಿಯ ಗುಡ್ಡವೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವದು, ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವದು.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಚೀಯೋನ್ ನಗರಿಯೊಂದೇ ಉಳಿದು ದ್ರಾಕ್ಷೇತೋಟದ ಮಂಚಿಕೆಯಂತೆಯೂ ಸವುತೆಯ ಹೊಲದ ಗುಡಸಲಿನ ಹಾಗೂ ಮುತ್ತಿದ ಪಟ್ಟಣದೋಪಾದಿಯಲ್ಲಿಯೂ ಇದೆ.


ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.


ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ನಡೆಯಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು [ಜನಾಂಗವನ್ನಾಗಿ] ಮಾಡಿ ಸ್ಥಾಪಿಸಿದನಲ್ಲವೇ.


ಬೆಟ್ಟದ ಶಿಖರದಿಂದ ನಾನು ಅವರನ್ನು ಕಂಡೆನು; ಗುಡ್ಡದಿಂದ ಅವರನ್ನು ನೋಡಿದೆನು. ಆ ಜನಾಂಗವು ತಾನು ಇತರ ಜನಾಂಗಗಳಂತಲ್ಲವೆಂದು ಭಾವಿಸಿಕೊಂಡು ಪ್ರತ್ಯೇಕವಾಗಿ ವಾಸಿಸುತ್ತದೆ.


ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ಅನುಗ್ರಹ ದೊರಕಿತೆಂಬದು ನೀನೇ ನಮ್ಮ ಸಂಗಡ ಬರುವದರಿಂದಲೇ ಹೊರತು ಬೇರೆ ಯಾತರಿಂದ ತಿಳಿದುಬರುವದು? ಇದರಿಂದ ನಾನೂ ನಿನ್ನ ಪ್ರಜೆಗಳಾದ ಇವರೂ ಭೂವಿುಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷವಾಗಿದ್ದೇವೆಂಬದು ತೋರುವದು ಅಂದನು.


ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.


ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ ಅದು ಬೇರು ಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು