Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:27 - ಕನ್ನಡ ಸತ್ಯವೇದವು J.V. (BSI)

27 ಅವರಲ್ಲಿ ಯಾರೂ ಬಳಲಿ ಮುಗ್ಗರಿಸರು, ಯಾರೂ ತೂಕಡಿಸಿ ನಿದ್ರಿಸರು; ಅವರ ನಡುಕಟ್ಟು ಬಿಚ್ಚಿಲ್ಲ, ಅವರ ಕೆರದ ಬಾರು ಕಿತ್ತಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಳಲಿ ಹೋಗರು ಅವರಲ್ಲಿ ಯಾರೂ ಮುಗ್ಗರಿಸಿ, ನಿದ್ರಿಸರು ಯಾರೂ ತೂಕಡಿಸಿ, ಸಡಿಲವಾಗದವರ ನಡುಕಟ್ಟು, ಕಿತ್ತುಹೋಗದವರ ಕೆರದ ಕಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಶತ್ರುಗಳು ಆಯಾಸಗೊಳ್ಳುವುದಿಲ್ಲ, ನೆಲಕ್ಕೆ ಬೀಳುವುದಿಲ್ಲ. ಅವರು ತೂಕಡಿಸುವುದಿಲ್ಲ, ನಿದ್ರೆ ಮಾಡುವುದಿಲ್ಲ. ಅವರ ಸೊಂಟಪಟ್ಟಿಯು ಆಯುಧದೊಂದಿಗೆ ಯಾವಾಗಲೂ ಸಿದ್ಧವಾಗಿರುವುದು. ಅವರ ಪಾದರಕ್ಷೆಗಳ ದಾರವು ಎಂದಿಗೂ ತುಂಡಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರಲ್ಲಿ ಯಾರೂ ದಣಿದು ಮುಗ್ಗರಿಸರು, ಅವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ, ಅವರ ನಡುಕಟ್ಟು ಬಿಚ್ಚಿಕೊಳ್ಳುವುದಿಲ್ಲ. ಕೆರದ ಬಾರು ಹರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:27
14 ತಿಳಿವುಗಳ ಹೋಲಿಕೆ  

ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೇ ಚಿಂದಿಯನ್ನು ಬಿಗಿಯುವನು.


ಪ್ರಭುಗಳಿಗೆ ಅವಮಾನವನ್ನುಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಲಿಸುವನು.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.


ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ ನನ್ನ ಮಾರ್ಗವನ್ನು ಸರಾಗಮಾಡುವವನೂ ಆತನೇ.


ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವದನ್ನು ಬಲ್ಲೆಯಲ್ಲಾ; ಅವನು ಇಬ್ಬರು ಇಸ್ರಾಯೇಲ್ ಸೇನಾಪತಿಗಳಾದ ನೇರನ ಮಗ ಅಬ್ನೇರನನ್ನೂ ಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತ ಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಮನೆಯ ಹೊರಗೆ ಕತ್ತಿಯೂ ಒಳಗೆ ಭಯವೂ ಇರುವವು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.


ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು