Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:6 - ಕನ್ನಡ ಸತ್ಯವೇದವು J.V. (BSI)

6 ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:6
32 ತಿಳಿವುಗಳ ಹೋಲಿಕೆ  

ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಬರದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ.


ಆಗ ನೀವು ಹೊಲದಲ್ಲಿ ಬೀಜಬಿತ್ತುವದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡದೊಡ್ಡ ಕಾವಲುಗಳಲ್ಲಿ ಮೇಯುವವು.


ಪಟ್ಟಣದಲ್ಲಿ ಹಾಳೇ ಉಳಿದಿದೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ಅವರ ಪಾಪಗಳ ನಿವಿುತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವದಾದರೆ


ಗೋದಿಗೆ ಬದಲಾಗಿ ಮುಳ್ಳುಗಳೂ ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ. ಹೀಗೆ ಯೋಬನ ಮಾತುಗಳು ಮುಗಿದವು.


ಅವೆಲ್ಲಾ ಬಂದು ಕಡಿದಾದ ಡೊಂಗರಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಎಲ್ಲಾ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.


ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು.


ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂವಿುಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವದೆಂದರೆ - ನೋಡು, ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ,


ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.


ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ಅದು ನನ್ನ ದ್ರಾಕ್ಷೆಯ ಬಳ್ಳಿಗಳನ್ನು ಹಾಳುಮಾಡಿದೆ, ನನ್ನ ಅಂಜೂರದ ಗಿಡಗಳನ್ನು ಸಿಗಿದುಹಾಕಿದೆ, ಅವುಗಳನ್ನು ಬೋಳುಮಾಡಿ ಬಿಟ್ಟುಬಿಟ್ಟಿದೆ; ರೆಂಬೆಗಳು ಬಿಳುಪಾಗಿ ಹೋಗಿವೆ.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಯಾಜಕನನ್ನೂ ಧಿಕ್ಕರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು