Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:10 - ಕನ್ನಡ ಸತ್ಯವೇದವು J.V. (BSI)

10 ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:10
45 ತಿಳಿವುಗಳ ಹೋಲಿಕೆ  

ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು, ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.


ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನೋ ಅವನಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.


ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ನನ್ನ ಬಾಯಿ ಯೆಹೋವನನ್ನು ಕೀರ್ತಿಸುವದು; ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.


ಆತನು ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ,


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಯೆಹೋವನೇ, ನನ್ನ ದೀಪವು ನೀನೇ; ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವನು.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು