Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:11 - ಕನ್ನಡ ಸತ್ಯವೇದವು J.V. (BSI)

11 ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:11
30 ತಿಳಿವುಗಳ ಹೋಲಿಕೆ  

ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹೋಗಿರಿ, ನಿಮ್ಮ ಬೊಂಬೆಗಳನ್ನು ಸೇವಿಸಿಕೊಳ್ಳಿರಿ; ಮುಂದಂತು ನನ್ನ ಮಾತನ್ನು ಕೇಳೇ ಕೇಳುವಿರಿ, ಇನ್ನು ಮೇಲೆ ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವದೇ ಇಲ್ಲ.


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.


ಆಮೇಲೆ ಅರಸನು ಸೇವಕರಿಗೆ - ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ನೆರೆಯವನನ್ನು ಮೋಸಗೊಳಿಸಿ ತಮಾಷೆಗೋಸ್ಕರ ಮಾಡಿದೆನಲ್ಲಾ ಎನ್ನುವವನು


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.


ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವದಿಲ್ಲ.


ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ.


ನಿಮ್ಮನ್ನು ಬೂದಿಯಿಂದಲೂ ಬಿಸಿಗಾಳಿಯಿಂದಲೂ ಬಾಧಿಸಿದೆನು; ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷೆಯ ತೋಟ, ಅಂಜೂರದ ಗಿಡ, ಎಣ್ಣೆಯ ಮರ, ಇವುಗಳನ್ನು ವಿುಡತೆಯು ತಿಂದುಬಿಟ್ಟಿತು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ.


ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು