Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:18 - ಕನ್ನಡ ಸತ್ಯವೇದವು J.V. (BSI)

18 ಹೆತ್ತ ಮಕ್ಕಳಲ್ಲೆಲ್ಲಾ ಅವಳನ್ನು ಕರೆದುಕೊಂಡು ಹೋಗುವವನು ಯಾರೂ ಇಲ್ಲ; ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡೆಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವಳು ಹೆತ್ತ ಎಲ್ಲಾ ಪುತ್ರರಲ್ಲಿ ಅವಳನ್ನು ನಡೆಸುವುದಕ್ಕೆ ಒಬ್ಬನೂ ಇಲ್ಲ. ಅವಳು ಬೆಳೆಯಿಸಿದ ಎಲ್ಲಾ ಪುತ್ರರಲ್ಲಿ, ಅವಳ ಕೈಯನ್ನು ಹಿಡಿಯುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:18
18 ತಿಳಿವುಗಳ ಹೋಲಿಕೆ  

ಆಗ ನೀನು ನಿನ್ನ ಮನದೊಳಗೆ - ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು; ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ; ಇವರೆಲ್ಲಿದ್ದರು? ಅಂದುಕೊಳ್ಳುವಿ.


ನನ್ನ ಆಪ್ತವಿುತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಪರಿಚಯವು.


ಆತನು ಕುರುಡನ ಕೈ ಹಿಡುಕೊಂಡು ಊರ ಹೊರಕ್ಕೆ ಕರಕೊಂಡು ಹೋಗಿ ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ಕೈಯಿಟ್ಟು - ನಿನಗೇನಾದರೂ ಕಾಣುತ್ತದೋ? ಎಂದು ಅವನನ್ನು ಕೇಳಿದನು.


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.


ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -


ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ ಎಂದು ನಿನಗೆ ಹೇಳುವ ನಿನ್ನ ದೇವರಾದ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.


ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.


ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈಹಿಡಿಯುವವರನ್ನು ಹುಡುಕುತ್ತಾ ತಿರುಗಾಡಿದನು.


ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವದಿಲ್ಲ, ಕೆಡುಕರನ್ನು ಕೈಹಿಡಿಯುವದಿಲ್ಲ.


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ; ನನ್ನ ಗುಡಾರವನ್ನು ಹಾಕುವದಕ್ಕೂ ನನ್ನ ಪರದೆಗಳನ್ನು ಬಿಗಿಯುವದಕ್ಕೂ ಇನ್ನು ಯಾರೂ ಇರುವದಿಲ್ಲ.


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ, ಮತ್ತೆ ಏಳಳು; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನೆತ್ತಲು ಯಾರೂ ಇಲ್ಲ.


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು